ಬಿಟಿ ಲಲಿತಾ ನಾಯಕ್, ನಟ ಶಿವರಾಜ್ ಕುಮಾರ್, ಸಿಟಿ ರವಿಗೆ ಕೊಲೆ ಬೆದರಿಕೆ

ಸೋಮವಾರ, 22 ಮಾರ್ಚ್ 2021 (09:48 IST)
ಬೆಂಗಳೂರು: ನಟ ಶಿವರಾಜ್ ಕುಮಾರ್, ಬಿಜೆಪಿ ನಾಯಕ ಸಿಟಿ ರವಿ ಹಾಗೂ ತಮ್ಮನ್ನು ಕೊಲೆ ಮಾಡುವುದಾಗಿ ಬೆದರಿಕೆ ಪತ್ರವೊಂದು ಬಂದಿದೆ ಎಂದು ಮಾಜಿ ಸಚಿವೆ ಬಿಟಿ ಲಲಿತಾ ನಾಯಕ್ ಹೇಳಿದ್ದಾರೆ.


ಈ ಸಂಬಂಧ ಅವರು ಪೊಲೀಸರಿಗೆ ದೂರನ್ನೂ ನೀಡಿದ್ದಾರೆ. ಮಾಜಿ ಸಚಿವ ಎಚ್ ಎಂ ರೇವಣ್ಣ ಅಭಿನಂದನಾ ಸಮಾರಂಭದಲ್ಲಿ ಅವರು ಸಾರ್ವಜನಿಕವಾಗಿ ಈ ವಿಚಾರ ಹೇಳಿದ್ದಾರೆ. ಮೇ 1 ರಂದು ಪ್ರಮುಖರನ್ನು ಕೊಲೆ ಮಾಡುವುದಾಗಿ ಬೆದರಿಕೆ ಪತ್ರ ಬಂದಿದೆ ಎಂದಿದ್ದಾರೆ.

ಇನ್ನು ಲಲಿತಾ ನಾಯಕ್ ಸೇರಿದಂತೆ ಪ್ರಮುಖರಿಗೆ ಕೊಲೆ ಬೆದರಿಕೆ ಪತ್ರ ಬಂದಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಇದರ ಹಿಂದೆ ಯಾರೇ ಇದ್ದರೂ ತಕ್ಕ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ