ಈಶ್ವರಪ್ಪ ಬೆಂಬಲಕ್ಕೆ ನಿಂತ ರಾಯಣ್ಣ ಬ್ರಿಗೇಡ್ ಜೊತೆ ಮುರಳಿಧರ ರಾವ್ ಸಂಧಾನ ಇಂದು

ಗುರುವಾರ, 22 ಫೆಬ್ರವರಿ 2018 (08:35 IST)

ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಬೆಂಬಲಕ್ಕೆ ನಿಂತಿರುವ ರಾಯಣ್ಣ ಬ್ರಿಗೇಡ್ ಮುಖಂಡರು ಪ್ರತಿಭಟನೆ ನಡೆಸಲು ಮುಂದಾಗಿರುವ ಮಾಹಿತಿ ಮೇರೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳಧರ ರಾವ್ ಸಂಧಾನ ನಡೆಸಲು ಮುಂದಾಗಿದ್ದಾರೆ.

ರಾಯಣ್ಣ ಬ್ರಿಗೇಡ್ ರಾಜ್ಯ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿರುವ ಮುರಳಿಧರ ರಾವ್ ಅವರು ಗುರುವಾರ ಸಭೆಗೆ ಬರುವಂತೆ ಆಹ್ವಾನಿಸಿದ್ದಾರೆ.

ಈಶ್ವರಪ್ಪ ಅವರಿಗೆ ಟಿಕೆಟ್ ನೀಡಬಾರದು ಎಂದು ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಈಶ್ವರಪ್ಪ ಬೆಂಬಲಕ್ಕೆ ನಿಂತ ರಾಯಣ್ಣ ಬ್ರಿಗೇಡ್ ಮುಖಂಡರು ಫೆ. 26ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ