ನನ್ನ ರಾಜಕೀಯ ಹೋರಾಟ ಇನ್ನೂ ಮುಗಿದಿಲ್ಲ: ದೇವೇಗೌಡ ಗುಡುಗು

ಶುಕ್ರವಾರ, 24 ಮಾರ್ಚ್ 2017 (18:06 IST)
ನನ್ನ ರಾಜಕೀಯ ಹೋರಾಟ ಇನ್ನೂ ಮುಗಿದಿಲ್ಲ. ಮುಂಬರುವ ಚುನಾವಣೆಗಳಲ್ಲೂ ಹೋರಾಟ ನಡೆಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
 
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಚುನಾವಣಾ ಪ್ರಚಾರ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.
 
 ರಾಷ್ಟ್ರೀಯ ಪಕ್ಷಗಳು ರಾಷ್ಟ್ರ ಹಿತಾಸಕ್ತಿಗೆ ಹೆಚ್ಚಿನ ಗಮನ ನೀಡುತ್ತವೆ. ಪ್ರಾದೇಶಿಕ ಪಕ್ಷ ರಾಜ್ಯದ ಹಿತಾಸಕ್ತಿಗೆ ಗಮನ ಕೊಡುತ್ತವೆ. ಆದ್ದರಿಂದ, ರಾಜ್ಯದ ಜನತೆ, ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ಗೆ ಬೆಂಬಲ ನೀಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.
 
ಒಂದು ವೇಳೆ, ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮೊದಲು ರೈತರ ಸಾಲ ಮನ್ನಾ ಮಾಡುವುದರೊಂದಿಗೆ ರೈತರಿಗಾಗಿ ವಿಶೇಷ ಯೋಜನೆಗಳನ್ನು ರೂಪಿಸಲಾಗುವುದು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ