‘ನನ್ನ ಮೌನವೂ ವೀಕ್ನೆಸ್ ಅಲ್ಲ’

ಶನಿವಾರ, 21 ಅಕ್ಟೋಬರ್ 2023 (15:47 IST)
ಬೆಳಗಾವಿ ರಾಜಕಾರಣ ಮತ್ತೆ ಗರಿಗೆದರಿದೆ. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿನ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ ಆಗುತ್ತಿದೆ. ನನ್ನ ಮೌನ ವೀಕ್ನೆಸ್​ ಅಲ್ಲ ಅಂತ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಪರೋಕ್ಷವಾಗಿ ಲಕ್ಷಿ ಹೆಬ್ಬಾಳ್ಕರ್​ ವಿರುದ್ಧ ವಾಗ್ದಾಳಿ ಮಾಡಿದ್ದರು. ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ “ನನ್ನ ಮೌನವೂ ವೀಕ್ನೆಸ್ ಅಲ್ಲ” ಎಂದು ಹೇಳುವ ಮೂಲಕ ಸತೀಶ್ ಜಾರಕಿಹೊಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಜಿಲ್ಲಾ ಕಾಂಗ್ರೆಸ್​ನಲ್ಲಿ ಸಣ್ಣ ಸಮಸ್ಯೆ ಕೂಡ ಇಲ್ಲ. ಬಹಳಷ್ಟು ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ. ನನ್ನ ಮತ್ತು ಸತೀಶ್ ಅಣ್ಣವರ ಮಧ್ಯೆ ಯಾವುದೇ ಸಮಸ್ಯೆ ಇಲ್ಲ. ಮೈಸೂರಿಗೆ ಹೋಗಲು ಸತೀಶ್ ಜಾರಕಿಹೊಳಿ ಅಣ್ಣ ನನ್ನನ್ನು ಕರೆದಿದ್ದರು. ನನ್ನ ಟಿಕೆಟ್ ಕೂಡ ಬುಕ್ ಮಾಡಿದ್ದರು. ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು ಮೈಸೂರು ಹೋಗಲು ಪ್ಲ್ಯಾನ್ ಮಾಡಿದ್ದರು. ಸಕ್ಕರೆ ಕಾರ್ಖಾನೆ ಬಾಯ್ಲರ್ ಪೂಜೆ ಹಿನ್ನೆಲೆಯಲ್ಲಿ ನಾನು ಹೋಗಲಿಲ್ಲ ಎಂದು ತಮ್ಮ ಮತ್ತು ಸತೀಶ್​ ಜಾರಕಿಹೊಳಿ ಮಧ್ಯೆ ಮುಸುಕಿನ ಗುದ್ದಾಟವಿದೆ ಎಂಬ ವದಂತಿಗೆ ಸ್ಪಷ್ಟನೆ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ