ಸಿಎಂ ಜೇಷ್ಠಪುತ್ರ ರಾಕೇಶ್ ಸಿದ್ದರಾಮಯ್ಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದ ಗೃಹ ಸಚಿವರು, ಮೈಸೂರು ಕೋರ್ಟ್ನಲ್ಲಿರುವ ಕಕ್ಷಿದಾರರು ಬಳಸುವ ಶೌಚಾಲಯದಲ್ಲಿ ಸ್ಫೋಟ ಸಂಭವಿಸಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಹಾಗೂ ಡಿಜಿಪಿ ಓಂ ಪ್ರಕಾಶ್ ಅವರು ಹಾಜರಿದ್ದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಸ್ಫೋಟದ ತೀವ್ರತೆ ಕಡಿಮೆ ಇದ್ದರು ಪರಿಣಾಮ ಮಾತ್ರ ಹೆಚ್ಚಿದೆ. ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ. ಆದರೆ, ಸ್ಫೋಟದಲ್ಲಿ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ತನಿಖೆಯ ನಂತರವಷ್ಟೇ ಸಂಪೂರ್ಣ ವಿವರ ಸಿಗಲಿದೆ ಎಂದು ತಿಳಿಸಿದರು.