ಮೈಸೂರು ನ್ಯಾಯಾಲಯದ ಆವರಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಬಾಂಬ್ ನಿಷ್ಕ್ರಿಯ ದಳ, ಸ್ಫೋಟಕ ವಸ್ತು ಪತ್ತೆ ದಳ ಹಾಗೂ ಶ್ವಾನದಳ ಸ್ಥಳದಲ್ಲೇ ಮೊಕ್ಕಾಂ ಹೂಡಿದೆ. ಡಿಜಿಪಿ ನೀಲಮಣಿ ಹಾಗೂ ಆರ್.ರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಶೌಚಾಲಯ ಸ್ವಚ್ಚಗೊಳಿಸುವ ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.
ಮೈಸೂರು ಕೋರ್ಟ್ನಲ್ಲಿ ಕಕ್ಷಿದಾರರು ಬಳಸುವ ಶೌಚಾಲಯದಲ್ಲಿ ನಿನ್ನೆ ಸಂಜೆ ವೇಳೆ ಸ್ಫೋಟದ ಶಬ್ದ ಕೇಳಿಬಂದಿತ್ತು. ಇನ್ನೂ ಎರಡು ಅನುಮಾನಾಸ್ವದ ಪೊಟ್ಟಣಗಳು ಪತ್ತೆಯಾಗಿದ್ದು, ಸ್ಪೋಟಕ ಸಾಮಾಗ್ರಿಗಳಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು.