ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ಜಿಲ್ಲಾ ಪದಾಧಿಕಾರಿಗಳ ನೇಮಕ ಪಟ್ಟಿಯನ್ನು ರದ್ದುಗೊಳಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದು, ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಅವರ ಸಮ್ಮುಖದಲ್ಲಿ ಕಾರ್ಯಕರ್ತರ ಭಿನ್ನಮತ ಸ್ಫೋಟವಾಗಿದೆ.
ಬಿಜೆಪಿ ಪದಾಧಿಕಾರಿಗಳ ಪಟ್ಟಿಯನ್ನು ಪರಿಷ್ಕರಣೆ ಸಂದರ್ಭದಲ್ಲಿ ತಮಗೆ ಬೇಕಾದವರಿಗೆ ಹುದ್ದೆ ನೀಡಿದ್ದು, ಪಕ್ಷಕ್ಕಾಗಿ ದುಡಿದವರನ್ನು ನಿರ್ಲಕ್ಷಿಸಲಾಗಿದೆ ಎಂದು ರಾಜ್ಯ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿತ್ತು. ಆದೆರ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇದೀಗ ಮೈಸೂರು ಜಿಲ್ಲಾ ಬಿಜೆಪಿ ಘಟಕದಲ್ಲಿಯೂ ಭಿನ್ನಮತ ಸ್ಫೋಟವಾಗಿದೆ.