ಮೈಸೂರು: ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಮೈಸೂರಿನ ಯದುವಂಶದ ಉತ್ತರಾಧಿಕಾರಿ ಪಟ್ಟಾಭಿಷೇಕ ಮಹೋತ್ಸವ ವಿಜೃಂಭಣೆಯಿಂದ ನಡೆಯುವುದರೊಂದಿಗೆ ಮೈಸೂರಿನ ಅರಮನೆಯಲ್ಲಿ ರಾಜವೈಭವ ಮರುಕಳಿಸಿತು. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಪಟ್ಟಾಭಿಷೇಕದ ಹಿನ್ನೆಲೆಯಲ್ಲಿ ಅಂಬಾವಿಲಾಸ್ ಅರಮನೆಯಲ್ಲಿ ಸಂಭ್ರಮ, ಸಡಗರ ಮೇಳೈಸಿತ್ತು.