ಇಂದು ನಡ್ಡಾ ರಾಜ್ಯ ಪ್ರವಾಸ

ಶುಕ್ರವಾರ, 17 ಮಾರ್ಚ್ 2023 (19:53 IST)
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದ್ದು, ರಾಜ್ಯಾದ್ಯಂತ ಯಾತ್ರೆಗಳದ್ದೇ ಸದ್ದು ಕೇಳುತ್ತಿದೆ. ಪ್ರಜಾಪ್ರಭುತ್ವದ ಮತದಾನ ಹಬ್ಬಕ್ಕೆ ಯಾತ್ರೆಗಳ ಮೂಲಕ ಸ್ವಾಗತ ದೊರೆಯುತ್ತಿದೆ. BJP ಕರುನಾಡಿನ ನಾಲ್ಕು ದಿಕ್ಕಿನಿಂದ ವಿಜಯ ಸಂಕಲ್ಪ ಯಾತ್ರೆ ಪ್ರಾರಂಭಿಸಿದ್ದು, ಈ ಯಾತ್ರೆಯಲ್ಲಿ ಭಾಗಿಯಾಗಲು ಪಕ್ಷದ ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಅದರಂತೆ ಇಂದು ಮತ್ತು ನಾಳೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ BJP ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ ಭಾಗಿಯಾಗಲಿದ್ದಾರೆ. ಈ ಸಂಬಂಧ 2 ದಿನ ರಾಜ್ಯ ಪ್ರವಾಸ ಕೈಗೊಳ್ಳುವ ನಡ್ಡಾ  ಬಳ್ಳಾರಿಯ ಸಂಡೂರು ತಾಲೂಕಿನ ತೋರಣಗಲ್​ನಲ್ಲಿರುವ ಜಿಂದಾಲ್ ಏರ್​ಪೋರ್ಟ್​​ಗೆ ಆಗಮಿಸಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ