ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಹದೇವ ಪ್ರಸಾದ್, ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಎಂ. ಪಿ ರವೀಂದ್ರ ಹಾಗೂ ನಾಗರಾಜ್ ಇಬ್ಬರು ಆಕಾಂಕ್ಷಿಗಳಾಗಿದ್ದು, ಅಧ್ಯಕ್ಷರನ್ನು ಯಾವುದೇ ವಿವಾದವಿಲ್ಲದೇ ಸುಸೂತ್ರವಾಗಿ ಆಯ್ಕೆ ಮಾಡಲಾಗುತ್ತದೆ. ಸೆ.17ರಂದು ಅಧ್ಯಕ್ಷರ ಆಯ್ಕೆ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದರು.