ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತ: ಪೂಜಾರಿ

ಬುಧವಾರ, 28 ಡಿಸೆಂಬರ್ 2016 (15:01 IST)
ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತ ಎಂದು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ್ ಪೂಜಾರಿ ಭವಿಷ್ಯ ನುಡಿದಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ಪಕ್ಷದ ಮಾನ ಮರ್ಯಾದೆ ಹರಾಜು ಹಾಕುತ್ತಿದ್ದಾರೆ. ಈಗಲಾದರು ಸಿಎಂ ಸಿದ್ದರಾಮಯ್ಯ ಎಚ್ಚೆತ್ತುಕೊಳ್ಳಬೇಕು. ನಂಜನಗೂಡು ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಎಷ್ಟೇ ಒಳ್ಳೆಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು ಸೋಲು ನಿಶ್ಚಿತ. ಕಾಂಗ್ರೆಸ್‌ನಲ್ಲಿ ಗೊಂದಲ ಇರುವುದರಿಂದ ಪಕ್ಷಕ್ಕೆ ಈ ಸ್ಥಿತಿ ಬಂದಿದೆ ಎಂದು ಕಿಡಿಕಾರಿದರು.  
 
ಕರಾವಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಆದರೆ, ಕರಾವಳಿಯ ಇಬ್ಬರು ಮಾಜಿ ಸಿಎಂಗಳು ಎತ್ತಿನಹೊಳೆ ಯೋಜನೆಗೆ ಬೆಂಬಲ ನೀಡಿದ್ದಾರೆ. ಅವರಿಗೆ ತಾಕತ್ತಿದ್ದರೆ ಉಪ್ಪಿನಂಗಡಿ ಜನರನ್ನು ಭೇಟಿಯಾಗಿ ಮಾತುಕತೆ ನಡೆಸಲಿ ಎಂದು ಸವಾಲ್ ಎಸೆದಿದ್ದಾರೆ. 
 
ನನಗೆ ಎಐಸಿಸಿಯಿಂದ ನೋಟಿಸ್ ಬಂದಿಲ್ಲ. ಅದು ಬರುವುದು ಇಲ್ಲ. ಕೆಪಿಸಿಸಿ ನಾಯಕರು ನನಗಿಂತ ಬುದ್ಧಿವಂತರು ಎಂದು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ್ ಪೂಜಾರಿ ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ