ಕಾರ್ಯಕರ್ತರಿಗೆ ಕ್ಷಮೆ ಕೇಳಿದ ನಾರಾಯಣಗೌಡ

geetha

ಗುರುವಾರ, 11 ಜನವರಿ 2024 (17:46 IST)
ಬೆಂಗಳೂರು-ಕನ್ನಡ ನಾಮಫಲಕ ಹೋರಾಟದಲ್ಲಿ ಜೈಲು ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಕೊನೆಗೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ರಿಲೀಸ್ ಆದ ಬಳಿಕ ನಾರಾಯಣ ಗೌಡ ತಮ್ಮ ಕಾರ್ಯಕರ್ತರ ಬಳಿ ಕ್ಷಮೆ ಕೇಳಿದ್ದಾರೆ. ಬಿಡುಗಡೆಯ ಬಳಿಕ ಫೇಸ್ ಬುಕ್ ಮೂಲಕ ಲೈವ್ ಬಂದ ಕರವೇ ಅಧ್ಯಕ್ಷ, ಆರೋಗ್ಯದ ಸಮಸ್ಯೆಯಿಂದ ಯಾರ ಜೊತೆಯೂ ಮಾತನಾಡೋಕೆ ಆಗ್ಲಿಲ್ಲ. ಅದಕ್ಕಾಗಿ ಕ್ಷಮೆ ಕೇಳುತ್ತೇನೆ.

ನನ್ನ ದೇಹದ ಕೊನೆಯ ಹನಿ ರಕ್ತ ಇರುವವರೆಗೂ ಕನ್ನಡದ ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ. ಕನ್ನಡ ನಾಮಫಲಕ ಆಂದೋಲನ ಯಶಸ್ವಿಯಾಗಿದೆ. ಸರ್ಕಾರ ಈ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಿದೆ. ಇದು ಕನ್ನಡಿಗರ ಜಯ, ಕರವೇಯ ಜಯ. ಕಾನೂನಿನ ಚೌಕಟ್ಟಿನೊಳಗೆ ಈ ಹೋರಾಟ ಮುಂದುವರಿಸಿಕೊಂಡು ಹೋಗಬೇಕೆನ್ನುವುದು ನಮ್ಮ ಉದ್ದೇಶವಾಗಿತ್ತು ಎಂದು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ