ಮೋದಿ, ಅಮಿತ್ ಶಾ ಯಾರೂ ಬೇಕಾದರೂ ಪ್ರಚಾರಕ್ಕೆ ಬರಲಿ- ಸಿಎಂ

ಬುಧವಾರ, 6 ಡಿಸೆಂಬರ್ 2017 (16:43 IST)
ರಾಜ್ಯದಲ್ಲಿ ಪ್ರಚಾರ ನಡೆಸಲು ಪ್ರಧಾನಮಂತ್ರಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಯಾರು ಬೇಕಾದರು ಬರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಭಟ್ಕಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಚಾರಕ್ಕೆ ಬರಲು ನಮ್ಮ ಯಾವುದೇ ಅಭ್ಯಂತರವಿಲ್ಲ. ಆದರೆ ರಾಜ್ಯದ ಕೋಮು ಸಾಮರಸ್ಯ ಹಾಳು ಮಾಡುವ ಕೆಲಸ ಮಾಡಬಾರದು ಎಂದಿದ್ದಾರೆ.

ಮುಜರಾಯಿ ಇಲಾಖೆಯಲ್ಲಿ ದಲಿತರು ಅರ್ಚಕರಾಗಬಾರದು ಎಂದು ಎಲ್ಲಿಯೂ ಇಲ್ಲ. ಆದ್ದರಿಂದ ಇಲಾಖೆಯಲ್ಲಿ ಅರ್ಚಕರ ನೇಮಕದ ವಿಚಾರ ಪರಿಶೀಲಿಸಲಾಗುತ್ತಿದೆ. ಯಾರು ಬೇಕಾದರು ಅರ್ಚಕರಾಗಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ