ದೇಶದ ಜನರಿಗೆ ಭರ್ಜರಿ ಗಿಫ್ಟ್ ನೀಡಿದ ಮೋದಿ

ಮಂಗಳವಾರ, 30 ಜೂನ್ 2020 (16:17 IST)
ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಬಡ, ಮಧ್ಯಮ ವರ್ಗದವರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.

ಗರೀಬ್ ಕಲ್ಯಾಣ ಯೋಜನೆ ಬಡವರಿಗೆ ಅನುಕೂಲ ಆಗಿದೆ. ಹೀಗಾಗಿ ನವೆಂಬರ್ ಅಂತ್ಯದ ವರೆಗೆ ವಿಸ್ತರಣೆ ಮಾಡಲಾಗುತ್ತಿದೆ.
 ಅಕ್ಟೋಬರ್, ನವೆಂಬರ್ ವರೆಗೆ ಉಚಿತ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತದೆ ಎಂದಿದ್ದಾರೆ.

ಪ್ರತಿ ಸದಸ್ಯನಿಗೆ 5 ಕೆಜಿ ಅಕ್ಕಿ ಅಥವಾ ಗೋಧಿ, ಬೇಳೆ ಉಚಿತವಾಗಿ ಕೊಡಲಾಗುತ್ತಿದೆ. ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಗೆ ಬರುತ್ತಿದೆ.

ಅಮೆರಿಕಾದ ಜನಸಂಖ್ಯೆಗಿಂತ ಎರಡು ಪಟ್ಟು ಹೆಚ್ಚಿನ ಜನರಿಗೆ ಅನುಕೂಲವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ