ಮೋದಿ ವಿರೋಧಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ; ತೇಜಸ್ವಿ ವಿರುದ್ಧ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

ಶನಿವಾರ, 30 ಮಾರ್ಚ್ 2019 (09:22 IST)
ಬೆಂಗಳೂರು : ಮೋದಿ ವಿರೋಧಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಸಭೆಯೊಂದರಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ  ತೇಜಸ್ವಿ ಸೂರ್ಯ ಅವರು, ಕಳೆದ 60 ವರ್ಷಗಳಿಂದ ಪ್ರಜೆಗಳಲ್ಲಿರುವ ದೇಶಪ್ರೇಮವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಒಂದು ವೇಳೆ ಅವರು ದೇಶಪ್ರೇಮಿಗಳಾಗಿದ್ದರೆ ಭಾರತವನ್ನು ಬಡರಾಷ್ಟ್ರವನ್ನಾಗಿ ಇರಲು ಬಿಡುತ್ತಿರಲಿಲ್ಲ ಎಂದು ಕಿಡಿಕಾರಿದ್ದಾರೆ.

 

ಆದರೆ ಈಗ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಲ್ಲರೂ ಒಂದಾಗಿ ನಿಂತಿದ್ದಾರೆ.  ಮೋದಿ ಪರ ನೀವು ನಿಂತರೆ ಭಾರತೀಯರು. ಒಂದು ವೇಳೆ ಮೋದಿ ಅವರ ವಿರುದ್ಧ ನಿಂತರೆ ನೀವು ದೇಶ ವಿರೋಧಿಗಳು ಎಂದು ತೇಜಸ್ವಿ ಸೂರ್ಯ ಭಾಷಣ ಮಾಡಿದ್ದರು. ಈ ಹೇಳಿಕೆಯಿಂದ ಗರಂ ಆದ ಕಾಂಗ್ರೆಸ್ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ