ಮೋದಿ ನಾಲ್ಕೈದು ಬಾರಿ ರಾಜ್ಯಕ್ಕೆ ಬಂದ್ರೂ ಯಾವ ಗಾಳಿಯೂ ಬೀಸಲ್ಲ-ಸಿಎಂ ಸಿದ್ದರಾಮಯ್ಯ

ಸೋಮವಾರ, 5 ಮಾರ್ಚ್ 2018 (11:46 IST)
ಮೈಸೂರು: ರಾಜ್ಯಸಭೆ ಮೂರನೇ ಸ್ಥಾನಕ್ಕೆ ಯಾವುದೇ ಮೈತ್ರಿ ಇಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಸಭೆ ಹಿನ್ನೆಲೆ ಸಂಜೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ತೆರಳಲಿದ್ದಾರೆ.


ಜೆಇಎಸ್ ಜತೆ ಈವರೆಗೂ ಮಾತನಾಡಿಲ್ಲ, ಮಾತನಾಡೋಲ್ಲ. ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ಜನರ ಅವಶ್ಯಕತೆ ಇದೆ, ಜೆಡಿಎಸ್ ಅವಶ್ಯಕತೆ ಇಲ್ಲ. ಮೇಘಾಲಯ ತ್ರಿಪುರ ಚುನಾವಣೆ ಎಫೆಕ್ಟ್ ರಾಜ್ಯದಲ್ಲಿ ಖಂಡಿತ ಆಗಲ್ಲ ಎಂದು ಸಿಎಂ ಹೇಳಿದ್ದಾರೆ.


ಮೋದಿ ನಾಲ್ಕೈದು ಬಾರಿ ರಾಜ್ಯಕ್ಕೆ ಬಂದ್ರೂ ಯಾವ ಗಾಳಿಯೂ ಬೀಸಲ್ಲ.ಕೋಮುವಾದಿಗಳನ್ನು ಸೋಲಿಸಲು ರಾಷ್ಟ್ರಮಟ್ಟದಲ್ಲಿ ಸೆಕ್ಯೂಲರ್ ಪಾರ್ಟಿ ಒಂದಾಗಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ