ಇಂದು ಮತ್ತೆ ಕರ್ನಾಟಕಕ್ಕೆ ನರೇಂದ್ರ ಮೋದಿ

ಸೋಮವಾರ, 6 ಫೆಬ್ರವರಿ 2023 (07:21 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 6 ರಂದು ರಾಜ್ಯದ ಬೆಂಗಳೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಆಗಮಿಸಲಿದ್ದು, ಹಲವು ಮಹತ್ತರ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ ಉದ್ಘಾಟಿಸಲಿದ್ದಾರೆ. ವಿವಿಧ ರಾಜ್ಯಗಳ 67 ಬಂಕ್ಗಳಲ್ಲಿ ಪ್ರಾಯೋಗಿಕವಾಗಿ ಶೇ.20 ಎಥೆನಾಲ್ ಮಿಶ್ರಿತ ಪೆಟ್ರೋಲ್ ವಿತರಣೆಗೂ ಚಾಲನೆ ನೀಡಲಿದ್ದಾರೆ. ಬಳಿಕ ಏಕ ಬಳಕೆ ಪ್ಲಾಸ್ಟಿಕ್ನಿಂದ ತಯಾರಿಸಿದ ಸಮವಸ್ತ ಬಿಡುಗಡೆ ಮಾಡಲಿದ್ದಾರೆ. 

ನಂತರ ತುಮಕೂರಿಗೆ ತೆರಳಲಿರುವ ಪ್ರಧಾನಿ ಮೋದಿ, ಗುಬ್ಬಿ ತಾಲೂಕಿನ ಬಿದರಿಳ್ಳದಲ್ಲಿ 615 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ದೇಶದ ಅತಿದೊಡ್ಡ ಹೆಲಿಕಾಪ್ಟರ್ ತಯಾರಿಕಾ ಘಟಕ ಹಾಗೂ ತುಮಕೂರು ಕೈಗಾರಿಕಾ ಟೌನ್ಶಿಪ್ ಉದ್ಘಾಟನೆ ನೆರವೇರಿಸಲಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ