ಅಭಿವೃದ್ಧಿ ಬೇಕಾ ಅಥವಾ ಪ್ರಚೋದನಕಾರಿ ಮಾತುಗಳು ಬೇಕಾ?

geetha

ಶನಿವಾರ, 17 ಫೆಬ್ರವರಿ 2024 (20:21 IST)
ಮಂಗಳೂರು: ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ   ಆರೋಗ್ಯ  ಸಚಿವ ದಿನೇಶ್ ಗುಂಡೂರಾವ್ ಕೊಟ್ಟ ಮಾತನ್ನು ಉಳಿಸಿಕೊಂಡಿರುವ ಸರ್ಕಾರ ನಮ್ಮದು. ಒಳ್ಳೆಯ ಕೆಲಸ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ  ಮುಂದೆ ಹೆಜ್ಜೆ ಇಡುತ್ತಿದ್ದಾರೆ. ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರತಿಪಾಧನೆ ಮಾಡುತ್ತಿದ್ದಾರೆ ಎಂದರು.ಅಭಿವೃದ್ಧಿ, ಶಾಂತಿ ನೆಮ್ಮದಿ ಬೇಕಾ ಅಥವಾ ಧರ್ಮ, ಜಾತಿ, ಸ್ವಾರ್ಥ ಪ್ರಚೋದನಾಕಾರಿ ಮಾತುಗಳು ಬೇಕಾ ಮಂಗಳೂರಿಗನ್ನು ಪ್ರಶ್ನೆ ಮಾಡುತ್ತೇವೆ ಎಂದು ಆರೋಗ್ಯ  ಸಚಿವ ದಿನೇಶ್ ಗುಂಡೂರಾವ್  ಹೇಳಿದ್ದಾರೆ.

ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಬದಲಾವಣೆ ಆಗುತ್ತದೆ. ಜನರಿಗೂ ಇದನ್ನು‌ ನೋಡಿ‌ನೋಡಿ‌ ಅವರಿಗೂ ಸಾಕಾಗಿ ಹೋಗಿದೆ. ಬರೀ ಧರ್ಮ, ಜಾತಿ, ಸ್ವಾರ್ಥ, ಪ್ರಚೋದನಕಾರಿ ಮಾತು ಇದೇ ಅಗಿದೆ. ಈ ಬಗ್ಗೆ ಜನರಿಗೆ ಅರ್ಥವಾಗುವ ರೀತಿ ನಾವು ಪ್ರಚಾರ ಮಾಡುತ್ತೇವೆ. ನಿಮಗೆ ಅಭಿವೃದ್ಧಿ, ಶಾಂತಿ, ನೆಮ್ಮದಿ ಬೇಕಾ ಅಥವಾ ಪ್ರಚೋದನೆ ಮಾತುಗಳನ್ನೇ ಕೇಳಿಕೊಂಡು ಹೋಗಬೇಕಾ ಎಂಬ ಪ್ರಶ್ನೆಯನ್ನು ಜನರ ಮುಂದಿಡುತ್ತೇವೆ ಎಂದು ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.
 
ಬಿಜೆಪಿ ನಾಯಕರು ಬಾಯಿಬಿಟ್ಟರೆ ಬರೀ ಸುಳ್ಳೆ ಎಂದು ಕಿಡಿಕಾರಿದ ದಿನೇಶ್‌ ಗುಂಡೂರಾವ್‌, ಕೇವಲ ಪ್ರಚೋದನೆ ಮಾಡುವುದೇ ಬಿಜೆಪಿಯವರ ಅಭ್ಯಾಸ ಆಗಿದೆ. ಹಿಂದೂಗಳಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿಕೊಂಡೆ ರಾಜಕಾರಣ ಮಾಡುತ್ತಿದೆ ಎಂದು ಕಿಡಿ ಕಾರಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ