ರಾಹುಲ್ ಗಾಂಧಿ ಪ್ರಚಾರದಿಂದ ಹೊಸ ಚೈತನ್ಯ– ಖರ್ಗೆ

ಬುಧವಾರ, 14 ಫೆಬ್ರವರಿ 2018 (14:51 IST)
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಪ್ರಚಾರದಿಂದ ಪಕ್ಷದ ಕಾರ್ಯಕರ್ತರಿಗೆ ಹೊಸ ಚೈತನ್ಯ ಬಂದಿದೆ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರಿಗೆ ತಮ್ಮದೇ ಆದ ವರ್ಚಸ್ಸಿದೆ. ಆದರೆ, ಬಿಜೆಪಿಯವರು ವಿನಾಕಾರಣ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.
 
ಇದೇ ವೇಳೆ ತಮ್ಮ ವಿರುದ್ಧ ಬಿಜೆಪಿಯವರು ಅಕ್ರಮ ಆಸ್ತಿಗಳಿಕೆ ಆರೋಪ ಮಾಡುತ್ತಿದ್ದಾರೆ. ಇದು ಈಗಾಗಲೇ ಮುಗಿದುಹೋದ ವಿಚಾರವಾಗಿದ್ದು, ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯವರು ಈ ವಿಷಯವನ್ನು ಎತ್ತುತ್ತಿದ್ದಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ