ಪೇದೆ ಸುಭಾಶ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

ಮಂಗಳವಾರ, 23 ಮೇ 2017 (12:50 IST)
ಸಿಎಆರ್ ಪೇದೆ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪೇದೆ ಸುಭಾಶ್ ಆತ್ಮಹತ್ಯೆ ಹಿಂದೆ ಐಪಿಎಲ್ ಬೆಟ್ಟಿಂಗ್ ಕರ್ಮಕಾಂಡವಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬೆಟ್ಟಿಂಗ್`ನಲ್ಲಿ ತೊಡಗಿದ್ದ ಪೇದೆ ಸುಭಾಶ್ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲಾಗದೇ ಆತ್ಮಹತ್ಯೆಗೆ ನಿರ್ಧರಿಸಿದ್ದಾನೆ ಎಂದು ವರದಿಯಾಗಿದೆ.

ಘಟನೆ ನಡೆದಿದ್ದು ಹೇಗೆ..?: ಸಂಪಿಗೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗಡೆನಗರದಲ್ಲಿ ಕ್ವಾಟ್ರಸ್`ನಲ್ಲಿ ಪೇದೆ ಸುಭಾಶ್ ಪತ್ನಿ ವೀಣಾ ಮತ್ತು ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಣಾ ಅಣ್ಣ ಬಾಗಿಲು ತೆರೆದಾಗ ಘಟನೆ ಬಹಿರಂಗಗೊಂಡಿದ್ದು, ಸ್ಥಳೀಯರ ನೆರವಿನೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಪತ್ನಿ ವೀಣಾ ಮತ್ತು ಇಬ್ಬರು ಮಕ್ಕಳು ಅಸುನೀಗಿದ್ದು, ಪೇದೆ ಸ್ಥಿತಿ ಚಿಂತಾಜನಕವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ