ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯ ಪ್ರಮಾಣ ವಚನ ಸ್ವೀಕಾರ

ಸೋಮವಾರ, 3 ಜುಲೈ 2023 (14:00 IST)
ವಿಧಾನ ಪರಿಷತ್ ಸಮ್ಮೇಳನ ಸಭಾಂಗಣದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತ್ತಿದ್ದು,ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು, ಬೋಸರಾಜು ರಿಂದ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯುತ್ತಿದೆ.ಸಚಿವ ಶರಣಪ್ರಕಾಶ್ ಪಾಟೀಲ್, ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಎಚ್.ಕೆ‌ ಪಾಟೀಲ್, ಭಾಗಿಯಗಿದ್ದಾರೆ.ಶಾಸಕರಾದ ಕೋನರೆಡ್ಡಿ, ಅಲ್ಲಮಪ್ರಭು ಪಾಟೀಲ್, ಹಂಪಯ್ಯ ನಾಯ್ಕ್, ಅಲ್ಲಮಪ್ರಭು ಪಾಟೀಲ್ ಭಾಗಿಯಾಗಿದ್ದು, ಅರವಿಂದ ಅರಳಿ ಸೇರಿದಂತೆ ವಿಧಾನ ಪರಿಷತ್ ಸದಸ್ಯರು ಭಾಗಿಯಾಗಿದ್ದಾರೆ.
 
ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಭಾಗಿಯಗಿದ್ದು,ಮೊದಲಿಗೆ ಜಗದೀಶ್ ಶೆಟ್ಟರ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.ನಂತರ ಭಗವಂತನ ಹೆಸರಿನಲ್ಲಿ ಜಗದೀಶ್ ಶೆಟ್ಟರ್ ಪ್ರಮಾಣ ವಚನ ಸ್ವೀಕರಿಸಿದಾರೆ.ಮೂರನೇಯವರಾಗಿ ತಿಪ್ಪಣ್ಣಪ್ಪ ಕಮಕನೂರು ಅವರಿಂದ ಪ್ರಮಾಣ ವಚನ ಸ್ವೀಕಾರ ನಡೆದಿದೆ.ಕುಲದೇವತೆ ಮಾತಾ ಮಾಣಿಕೇಶ್ವರಿ ಹೆಸರಿನಲ್ಲಿ ಪ್ರಮಾಣ ವಚನವನ್ನ ತಿಪ್ಪಣ್ಣಪ್ಪ ಕಮಕನೂರು ಸ್ವೀಕರಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ