ಪ್ರೀತಿಸಿ ಮದುವೆ ಆದ ನವವಿವಾಹಿತೆ ಸಾವು: ಅನುಮಾನ ಮೂಡಿಸಿದ ಕತ್ತರಿಸಿದ ಕಿವಿ!

ಶನಿವಾರ, 4 ಜೂನ್ 2022 (19:37 IST)
ಪೋಷಕರ ವಿರೋಧದ ನಡುವೆಯೂ ಪ್ರೀತಿಸಿ ವಿವಾಹವಾಗಿದ್ದ ನವವಿವಾಹಿತೆ ವರ್ಷ ಕಳೆಯುವಷ್ಟರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಗ್ರಾಮದ ಅರುಣಾ ಹಾಗೂ ಕೊಂಡಪ್ಪ ದಂಪತಿ ಪುತ್ರಿ ಅನುಷಾ ಮೃತಪಟ್ಟಿದ್ದು, ಆಕೆಯ ಒಂದು ಕಿವಿ ಸಂಪೂರ್ಣ ಕತ್ತರಿಸಲಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಅನುಷಾ, ಕಳೆದ ವರ್ಷ ಚಿಕ್ಕಬಳ್ಳಾಪುರ ತಾಲೂಕಿನ ಕರಿಗಾನಪಾಳ್ಯ ಗ್ರಾಮದ ಅಭಿಲಾಷ್‍ನನ್ನು ಪ್ರೀತಿಸಿ ಮದುವೆಯಾಗಿದ್ದಳು. ಮದುವೆಯಾದ ನಂತರ ನಗರದ 9ನೇ ವಾರ್ಡಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಇದಕ್ಕಿಂದಂತೆ ಬೆಳಗ್ಗೆ ಅನುಷಾ ಶವವಾಗಿ ಪತ್ತೆಯಾಗಿದ್ದಾಳೆ.
ನೇಣು ಬಿಗಿದ ಸ್ಥಿತಿಯಲ್ಲಿ ಅನುಷಾಳ ಮೃತದೇಹ ಪತ್ತೆಯಾಗಿದ್ದು ಅನುಷಾಳ ಕಟ್‌ ಆಗಿರುವ  ಬಲಭಾಗದ ಕಿವಿ ಸಹ ಸಂಪೂರ್ಣ ಕಟ್ ಸಹ ನಾಪತ್ತೆಯಾಗಿದೆ.
ಅಳಿಯ ಅಭಿಲಾಷ್ ಕಲ್ಲು ಕ್ವಾರಿಯೊಂದರಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದು, ಲಾರಿ ತೆಗೆದುಕೊಳ್ಳಲು 2 ಲಕ್ಷ ಹಣ ನೀಡುವಂತೆ ಕೇಳಿದ್ದು, ಇದೇ ವಿಚಾರವಾಗಿ ಗಂಡ, ಹೆಂಡತಿ ಮಧ್ಯೆ ಜಗಳ ಆಗಿ ಅಭಿಲಾಷ್ ತಮ್ಮ ಮಗಳನ್ನು ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.
ಅಭಿಲಾಷ್ ನನ್ನು ವಶಕ್ಕೆ ಪಡೆದಿರುವ ಚಿಕ್ಕಬಳ್ಳಾಪುರ ನಗರ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಅನುಷಾ ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ