ಮುಂದೇ ನಾನೇ ಜೀನ್ಸ್ ಪಾರ್ಕ್ ಉದ್ಘಾಟಿಸಲು ಬರುತ್ತೇನೆ : ರಾಹುಲ್ ಗಾಂಧಿ

ಶನಿವಾರ, 29 ಏಪ್ರಿಲ್ 2023 (09:57 IST)
ಕಲಬುರಗಿ : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ರಾಜ್ಯಕ್ಕೆ ಆಗಮಿಸಿ ಬಳ್ಳಾರಿ ಹಾಗೂ ಕಲಬುರಗಿಯಲ್ಲಿ ಪ್ರಚಾರ ಕಾರ್ಯಕ್ರಮವನ್ನು ನಡೆಸಿದ್ದಾರೆ.
 
ಬಳ್ಳಾರಿ ತೆರಳಿದ ರಾಹುಲ್ ಗಾಂಧಿ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ಬಿ ನಾಗೇಂದ್ರ ಹಾಗೂ ಬಳ್ಳಾರಿ ನಗರ ಅಭ್ಯರ್ಥಿ ಭರತ ರೆಡ್ಡಿ ಪರವಾಗಿ ಪ್ರಚಾರ ಕಾರ್ಯ ನಡೆಸಿದರು. ಟಿಬಿ ಸ್ಯಾನಿಟೋರಿಯಂ ನಿಂದ ರಾಹುಲ್ ಗಾಂಧಿ ರೋಡ್ ಶೋ ಆರಂಭವಾಗಿ ಬೆಳಗಲ್ ಕ್ರಾಸ್, ಕೌಲ್ ಬಜಾರ್ ಮಾರ್ಗವಾಗಿ ಮೋತಿ ಸರ್ಕಲ್ ವರೆಗೆ ಸಾಗಿತ್ತು. ಬಳಿಕ ರಾಹುಲ್ ಗಾಂಧಿ ಮೋತಿ ಸರ್ಕಲ್ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ರಾಹುಲ್, ರಾಜ್ಯದಲ್ಲಿ ಚುನಾವಣೆ ನಡೆಯುತ್ತಿದೆ. 5 ವರ್ಷದ ಹಿಂದೆ ಚುನಾವಣೆ ನಡೆದಿತ್ತು. ನಿಮ್ಮ ಮತ ಪಡೆದು ಬಿಜೆಪಿಯವರು ಸರ್ಕಾರ ರಚನೆ ಮಾಡಿಲ್ಲ.

ನಮ್ಮ ಎಮ್ಎಲ್ಎಗಳನ್ನು ಖರೀದಿ ಮಾಡಿ ಸರ್ಕಾರ ಮಾಡಿದ್ದಾರೆ. 40% ಸರ್ಕಾರವನ್ನು ಕಿತ್ತು ಹಾಕಬೇಕು. ಜೆಪಿಯವರಿಗೆ 40 ನಂಬರ್ ಚೆನ್ನಾಗಿ ಒಪ್ಪುತ್ತೆ. ಅವರಿಗೆ 40 ಸೀಟ್ ಮಾತ್ರ ನೀಡಿ. ಕಾಂಗ್ರೆಸ್ಗೆ 140-150 ಸೀಟ್ ಗೆಲ್ಲಿಸಬೇಕಾಗಿದೆ. ಕಾಂಗ್ರೆಸ್ ಸರ್ಕಾರ 5 ತರಹದ ಗ್ಯಾರಂಟಿ ನೀಡಲಿದೆ ಎಂದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ