ಹಲವು ನಗರಗಳಲ್ಲಿ ನೈಟ್ ಕರ್ಫ್ಯೂ: ರಾಜ್ಯಕ್ಕೂ ಭೀತಿ

ಬುಧವಾರ, 17 ಮಾರ್ಚ್ 2021 (09:18 IST)
ನವದೆಹಲಿ: ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೇಶದ ಹಲವು ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಇದೀಗ ರಾಜ್ಯಕ್ಕೂ ಭೀತಿ ಎದುರಾಗಿದೆ.


ರಾಜ್ಯದಲ್ಲೂ ಕೊರೋನಾ ಪ್ರಕರಣಗಳು ಹೆಚ್ಚುತ್ತಿದೆ. ನಿನ್ನೆ ಸೋಂಕಿನ ಪ್ರಕರಣಗಳು ಸಾವಿರದ ಗಡಿ ದಾಟಿದೆ. ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ವಿವಿಧ ರಾಜ್ಯಗಳ ಸಿಎಂಗಳ ಜೊತೆ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕಠಿಣ ನಿಯಮದ ಕುರಿತಾಗಿ ತೀರ್ಮಾನವಾಗಬಹುದು.

ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರದ ಕೆಲವು ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ರಾಜ್ಯದಲ್ಲೂ ಇದೇ ರೀತಿ ಪ್ರಕರಣಗಳು ಹೆಚ್ಚಾದರೆ ನೈಟ್ ಕರ್ಫ್ಯೂ ಜಾರಿಯಾದರೂ ಅಚ್ಚರಿಯಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ