ಮಂಡ್ಯದಲ್ಲಿ ನಿಖಿಲ್ ಸೋಲು?: ಸಿಎಂಗೆ ಶುರುವಾದ ಭೀತಿ

ಶನಿವಾರ, 27 ಏಪ್ರಿಲ್ 2019 (16:04 IST)
ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಕ್ಷೇತ್ರದಿಂದ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಗೆ ಹಿನ್ನಡೆಯಾಗುತ್ತದೆ. ಹೀಗಂತ ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ ಸಿಎಂ ಜೆಡಿಎಸ್ ಶಾಸಕರ ವಿರುದ್ಧ ಗರಂ ಆಗಿದ್ದಾರೆ.

ಮಳವಳ್ಳಿ, ಮಂಡ್ಯ ನಗರ, ಶ್ರೀರಂಗಪಟ್ಟಣಗಳಲ್ಲಿ ಜೆಡಿಎಸ್ ಅಭ್ಯರ್ಥಿಗೆ ಹಿನ್ನಡೆಯಾಗಬಹುದು. ಹೀಗಂತ ವರದಿ ಸಲ್ಲಿಸಲಾಗಿದೆ. ಈ ವರದಿ ಆಧಾರದಲ್ಲಿ ಈ ಮೂರು ಕ್ಷೇತ್ರಗಳ ಶಾಸಕರ ಜತೆ ಮಾತನಾಡಿರುವ ಸಿಎಂ ಕುಮಾರಸ್ವಾಮಿ, ಹಿನ್ನೆಡೆಯಾದರಲ್ಲಿ ನೀವೇ ಜವಾಬ್ದಾರಿ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಈ ಮೂರು ಕ್ಷೇತ್ರಗಳಲ್ಲಿ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹಾಗಾಗಿ ಹಿನ್ನಡೆಯಾಗಬಲ್ಲದು ಎಂದು ವರದಿಯಲ್ಲಿ ಉಲ್ಲೇಖವಾಗಿದೆ.

ನಿಖಿಲ್ ವಿರುದ್ಧ ದಿ. ಅಂಬರೀಶ್ ಪತ್ನಿ ಸುಮಲತಾ ಸ್ಪರ್ಧೆ ಮಾಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ