ಪುರುಷತ್ವ ಪರೀಕ್ಷೆ: ನಿತ್ಯಾನಂದನಿಗೆ ಜಾಮೀನು ರಹಿತ ವಾರೆಂಟ್ ಜಾರಿ

ಸೋಮವಾರ, 28 ಜುಲೈ 2014 (12:58 IST)
ಇಂದು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು  ಹೈಕೋರ್ಟ್ ನೀಡಿದ್ದ ಆದೇಶವನ್ನು ಉಲ್ಲಂಘಿಸಿ ಗೈರುಹಾಜರಾಗಿದ್ದರಿಂದ ಆರೋಪಿ ನಿತ್ಯಾನಂದನಿಗೆ ರಾಮನಗರ ಸಿಜೆಎಂ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.
 
ನಿತ್ಯಾನಂದ ಪರ ವಕೀಲರು ತಮ್ಮ ಕಕ್ಷಿದಾರರು ಇಂದು ಕೋರ್ಟ್ ಹಾಜರಾಗಲು ಸಾಧ್ಯವಿಲ್ಲ. ಆದ್ದರಿಂದ ಖುದ್ದು ಹಾಜರಾತಿಗೆ ವಿನಾಯಿತಿ ನೀಡಬೇಕು ಎಂದು ಆರೋಪಿ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು.
 
ಪುರುಷತ್ವ ಪರೀಕ್ಷೆ ಸಂಬಂಧದ ವಿಚಾರಣೆ ಇಂದು ನ್ಯಾಯಾಲಯದಲ್ಲಿ ನಡೆಯಬೇಕಾಗಿತ್ತು, ಆದರೆ, ಆರೋಪಿ ನಿತ್ಯಾನಂದ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಗೈರುಹಾಜರಾಗಿದ್ದರಿಂದ ನ್ಯಾಯಮೂರ್ತಿಗಳು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
 
 
 

ವೆಬ್ದುನಿಯಾವನ್ನು ಓದಿ