ಬಜೆಟ್‌ನಲ್ಲಿ ಉಪಚುನಾವಣೆಯ ಮೇಲೆ ಪ್ರಭಾವ ಬೀರುವ ಘೋಷಣೆಗಳು ಬೇಡ: ಬಿಜೆಪಿ

ಶುಕ್ರವಾರ, 10 ಮಾರ್ಚ್ 2017 (16:34 IST)
ಬಜೆಟ್ ಮುಂದೂಡಲು ನಾವು ಒತ್ತಾಯಿಸುತ್ತಿಲ್ಲ. ಬಜೆಟ್‌ನಲ್ಲಿ ಉಪಚುನಾವಣೆಯ ಮೇಲೆ ಪ್ರಭಾವ ಬೀರುವ ಘೋಷಣೆಗಳು ಬೇಡ ಎಂದು ಬಿಜೆಪಿ ನಿಯೋಗ ಚುನಾವಣೆ ಆಯೋಗಕ್ಕೆ ಮನವಿ ಮಾಡಿದೆ.
 
ಬಿಜೆಪಿ ಹಿರಿಯ ಮುಖಂಡ ಸುರೇಶ್ ಕುಮಾರ್ ನೇತೃತ್ವದ ವಿಯೋಗ, ಚುನಾವಣಾ ಆಯೋಗದ ಕಚೇರಿಗೆ ತೆರಳಿ ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ಬಜೆಟ್‌ನಲ್ಲಿ ಉಪಚುನಾವಣೆ ಮೇಲೆ ಪ್ರಭಾವ ಬೀರುವಂತಹ ಘೋಷಣೆಗಳು ಘೋಷಿಸದಂತೆ ಸರಕಾರಕ್ಕೆ ನಿರ್ದೇಶನ ನೀಡಿ ಎಂದು ಮನವಿ ಮಾಡಲಾಗಿದೆ.
 
ಬಿಜೆಪಿ ನಾಯಕರಿಗೆ ಕಾಮನ್‌ಸೆನ್ಸ್ ಇಲ್ಲ
 
ಪಂಚ ರಾಜ್ಯಗಳಲ್ಲಿ ಉಪ ಚುನಾವಣೆ ಘೋಷಣೆಯಾದಾಗ ಕೇಂದ್ರ ಸರಕಾರ ಬಜೆಟ್ ಮಂಡಿಸಲಿಲ್ಲವಾ? ಆವಾಗ ಬಿಜೆಪಿ ನಾಯಕರಿಗೆ ನೀತಿಸಂಹಿತೆಯ ಅರಿವಿರಲಿಲ್ಲವಾ. ಬಿಜೆಪಿ ನಾಯಕರಿಗೆ ಕಾಮನ್‌ಸೆನ್ಸ್ ಅನ್ನುವುದೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ