ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ, ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದುರುದ್ದೇಶದಿಂದ ಪ್ರಕರಣ ದಾಖಲಿಸಲು ವಿಳಂಬ ಮಾಡಿಲ್ಲ. ಗಣಪತಿ ಅವರು ಆತ್ಮಹತ್ಯೆಗೆ ಶರಣಾದ ಸಮಯದಲ್ಲಿ ನಾನು ಉತ್ತರ ಕರ್ನಾಟಕದಲ್ಲಿದ್ದೆ. ಹೀಗಾಗಿ ಪ್ರಕರಣ ದಾಖಲಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು.