ಕಾವೇರಿ ತೀರ್ಪಿಗೆ ಸ್ತಬ್ಧವಾಯಿತು ತಮಿಳುನಾಡು-ಕರ್ನಾಟಕ ಗಡಿ

ಶುಕ್ರವಾರ, 16 ಫೆಬ್ರವರಿ 2018 (08:59 IST)
ಮೈಸೂರು: ಇಂದು ಮಹತ್ವದ ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದ ಅಂತಿಮ ತೀರ್ಪು ಬರುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಚಾಮರಾಜನಗರ ಜಿಲ್ಲೆಯ ಗಡಿ ಭಾಗದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.
 

ಇಲ್ಲಿಂದ ತಮಿಳು ನಾಡು ಕಡೆಗೆ ಸಾಗುವ ಮತ್ತು ತಮಿಳುನಾಡಿನಿಂದ ಇಲ್ಲಿಗೆ ಬರುವ ಕೆಎಸ್ ಆರ್ ಟಿಸಿ ಮತ್ತು ತಮಿಳುನಾಡು ಸಾರಿಗೆ ಬಸ್ ಗಳ ಸಂಚಾರ ರದ್ದಾಗಿದೆ. ಕೇವಲ ಚೆಕ್ ಪೋಸ್ಟ್ ವರೆಗಷ್ಟೇ ಬಸ್ ಸಂಚಾರ ನಡೆಸಲಾಗುತ್ತಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರನ್ನು ನಿಯೋಜಿಸಿರುವುದಾಗಿ ಚಾಮರಾಜನಗರ ಜಿಲ್ಲಾ ಹೆಚ್ಚುವರಿ ಎಸ್ ಪಿ ಗೀತಾ ಮಾಧ್ಯಮಗಳಿಗೆ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ