ಸಂಪುಟ ವಿಸ್ತರಣೆ ವಿಧಾನಸಭಾ ಉಪಚುನಾವಣೆ ಮುನ್ನವೋ, ನಂತರವೋ ಎಂಬ ಸುದ್ದಿಗಾರರ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡದ ಅವರು, ಈ ಬಗ್ಗೆ ನಾನು ಹೈಕಮಾಂಡ್ ಜತೆ ಚರ್ಚೆ ನಡೆಸಬೇಕು. ಇದುವರೆಗೆ ಯಾವುದೇ ಚರ್ಚೆಗಳು ನಡೆದಿಲ್ಲ. ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು ಎಂಬ ವಿಚಾರವೂ ನನ್ನ ಮುಂದೆ ಇಲ್ಲ. ಹೈಕಮಾಂಡ್ ಯಾವಾಗ ಹೇಳುತ್ತದೋ, ಆಗ ಸಂಪುಟ ವಿಸ್ತರಿಸುವೆ ಎಂದರು.
ಸರ್ಕಾರದ ವಿರುದ್ಧ ಅಲ್ಲ: ಗುರುವಾರ ಕನ್ನಡ ಸಂಘಟನೆಗಳು ಬೆಂಗಳೂರು ಬಂದ್ಗೆ ಕರೆ ನೀಡಿರುವುದು ಸರ್ಕಾರದ ವಿರುದ್ಧ ಅಲ್ಲ. ಅತ್ಯಾಚಾರದಂಥ ಘೋರ ಅಪರಾಧ ಎಸಗುವ ಪಾತಕಿಗಳ ವಿರುದ್ಧ ಎಂದರು. ನಗರದ ಖಾಸಗಿ ಶಾಲೆಯಲ್ಲಿ 6 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಿಬಿಐ ತನಿಖೆ ಅಗತ್ಯವಿಲ್ಲ. ಈ ಪ್ರಕರಣದ ತನಿಖೆ ನಡೆಸುವುದಕ್ಕೆ ಬೆಂಗಳೂರು ನಗರ ಪೊಲೀಸರು ಸಮರ್ಥರಿದ್ದಾರೆ. ಆರೋಪಿಗಳಿಗೆ ಶಿಕ್ಷೆಯಾಗುತ್ತದೆ ಎಂದು ಹೇಳಿದರು.