ಚುನಾವಣೆಯ ಬಜೆಟ್ ಅಲ್ಲ- ಸಿದ್ದರಾಮಯ್ಯ

ಶನಿವಾರ, 17 ಫೆಬ್ರವರಿ 2018 (10:17 IST)
ಚುನಾವಣೆ  ಬಜೆಟ್ ಅಲ್ಲ, ಇದು ಅಭಿವೃದ್ಧಿ ಹಾಗೂ ಬೆಳವಣಿಗೆ ಆಧಾರಿತ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಜೆಟ್ ಕುರಿತು ವಿಪಕ್ಷಗಳ ಹೇಳಿಕೆಗಳ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರದ ಬಜೆಟ್ ಚುನಾವಣೆಯ ಬಜೆಟ್ ಅಲ್ಲ ಎಂದಿದ್ದಾರೆ.

ಚುನಾವಣೆಯ ಬಜೆಟ್ ಆಗಿದ್ದರೆ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಬಹುದಿತ್ತು. ಆದರೆ, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದ್ದು, ಎಲ್ಲ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಎಲ್ಲ ವಲಯ ಹಾಗೂ ವರ್ಗದವರನ್ನು ಪರಿಗಣಿಸಿ ಬಜೆಟ್ ಮಾಡಲಾಗಿದ್ದು, ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಬಜೆಟ್ ಆಗಿದೆ ಎಂದು ಅಭಿಪ್ರಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ