ಹೆಚ್.ಡಿ. ಕುಮಾರಸ್ವಾಮಿ ತವರು ಜಿಲ್ಲೆಯಲ್ಲಿ ಕೊರೊನಾ ಭೀತಿ ಇಲ್ಲ

ಬುಧವಾರ, 11 ಮಾರ್ಚ್ 2020 (17:55 IST)
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿನಿಧಿಸುವ ಜಿಲ್ಲೆಯಲ್ಲಿ ಕೊರೊನಾ ವೈರಸ್ ಭಯ ಇಲ್ಲವೇ ಇಲ್ಲ.


ರಾಮನಗರ ಜಿಲ್ಲೆಯಲ್ಲಿ ಯಾವುದೇ ಕೊರೋನಾ ವೈರಸ್ (ಕೋವಿದ್-19) ಪ್ರಕರಣ ಪತ್ತೆಯಾಗಿಲ್ಲ. ಸಾರ್ವಜನಿಕರು ಭಯ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನ ತಿಳಿಸಿದ್ದಾರೆ.

ಚನ್ನಪಟ್ಟಣ ತಾಲ್ಲೂಕಿನ ವಿರೂಪಾಕ್ಷಿ ಹೋಬಳಿಯ ಇಗ್ಗಲೂರು ಗ್ರಾಮ ಪಂಚಾಯ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಔಷಧಿ ಮಾರಾಟ ಮಳಿಗೆಗಳಲ್ಲಿ ಮಾಸ್ಕ್ ದೊರಕುತ್ತಿಲ್ಲ ಎಂದು ಸಾರ್ವಜನಿಕರೊಬ್ಬರು ಕೇಳಿದಾಗ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿದ್ದು, ಕೊರೋನಾ ವೈರಸ್ ಸೋಂಕಿತರು ಅಥವಾ ನಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿರುವವರು ಇನ್ನೊಬ್ಬರಿಗೆ ಹರಡದಂತೆ  ಮಾಸ್ಕ್ ಧರಿಸದರೆ ಸಾಕು.

ಎಲ್ಲರೂ ಮಾಸ್ಕ್ ಧರಿಸಬೇಕಿಲ್ಲ, ಆರೋಗ್ಯ ಇಲಾಖೆ ತಿಳಿಸಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ ಎಂದಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಮುನ್ನಚ್ಚರಿಕಾ ಕ್ರಮವಾಗಿ ಸೋಂಕಿತರ ಚಿಕಿತ್ಸೆಗೆ ಪ್ರತ್ಯೇಕ ವಾಡ್೯ ತೆರೆಯಲಾಗಿದೆ ಹಾಗೂ ಅಗತ್ಯ ಔಷಧಿ ಹಾಗೂ ಮಾಸ್ಕ್ ಗಳ ದಾಸ್ತಾನುಗಳಿವೆ ಎಂದು ಹೇಳಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ