ಹಬ್ಬಕ್ಕೂ ಡಿಕೆಶಿಗೆ ಬಿಡುವಿಲ್ಲ

ಶುಕ್ರವಾರ, 4 ಆಗಸ್ಟ್ 2017 (09:18 IST)
ಬೆಂಗಳೂರು: ಇಂದು ವರಮಹಾಲಕ್ಷ್ಮಿ ಹಬ್ಬ. ಆದರೆ ಐಟಿ ದಾಳಿಗೊಳಗಾಗಿರುವ ಸಚಿವ ಡಿಕೆ ಶಿವಕುಮಾರ್ ಮನೆಯಲ್ಲಿ ಅಧಿಕಾರಿಗಳ್ದೇ ಸದ್ದು.

 
ಪ್ರತೀ ವರ್ಷ ಡಿಕೆಶಿ ಮನೆಯಲ್ಲಿ ಹಬ್ಬ ಅದ್ಧೂರಿಯಾಗಿ ನಡೆಯುತ್ತದೆ. ಆದರೆ ಈ ಬಾರಿ ಐಟಿ ಅಧಿಕಾರಿಗಳು ತಪಾಸಣೆ ನಡೆಸುತ್ತಿರುವುದರಿಂದ ಸಚಿವರು ಮತ್ತು ಮನೆಯ ಸದಸ್ಯರಿಗೆ ಅಕ್ಷರಶಃ ದಿಗ್ಬಂಧನ ಹೇರಲಾಗಿದೆ.

ಇಂದು ಹಬ್ಬವಿರುವ ಕಾರಣ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹೀಗಾಗಿ ಐಟಿ ಅಧಿಕಾರಿಗಳು ತಪಾಸಣೆ ನಡೆಸುತ್ತಿರುವ ಡಿಕೆಶಿ ಮನೆ ಹಾಗೂ ಸಂಬಂಧಿಗಳ ಮನೆಯಲ್ಲಿ ಮಕ್ಕಳೂ ಇದ್ದಾರೆ. ಆದರೆ ನಿನ್ನೆ ಅಧಿಕಾರಿಗಳು ಮಕ್ಕಳಿಗೆ ಮಾತ್ರ ಶಾಲೆಗೆ ಹೋಗಲು ಅನುವು ಮಾಡಿಕೊಟ್ಟಿದ್ದರು.

ಇದನ್ನೂ ಓದಿ.. ಅಪರೂಪಕ್ಕೆ ರಾಜ್ಯ ಸಭೆಗೆ ಕಾಲಿಟ್ಟ ಸಚಿನ್ ತೆಂಡುಲ್ಕರ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ