ಉಡುಪಿ ಟೋಲ್ ಅಪಘಾತ ಜಿಲ್ಲೆಯಲ್ಲಿ ಸರಿಯಾದ ಆಸ್ಪತ್ರೆ ಇಲ್ಲವಾದದ್ದೆ ಕಾರಣವಾಯ್ತಾ ?

ಶುಕ್ರವಾರ, 22 ಜುಲೈ 2022 (14:34 IST)
ಉಡುಪಿ ಜಿಲ್ಲೆಯ ಶಿರೂರು ಟೋಲ್‌ಗೇಟ್ ಬಳಿ ನಡೆದ ಆಯಂಬುಲೆನ್ಸ್ ಅಪಘಾತ ಪ್ರಕರಣ ಕರಾವಳಿ ಭಾಗದ ಜನರನ್ನ ಬೆಚ್ಚಿಬೀಳಿಸಿದೆ.
ಅಪಘಾತದಲ್ಲಿ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ನಾಲ್ವರು ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆಯ ನಂತರ ಇಂದು ಅಂತಿಮ ಸಂಸ್ಕಾರ ನಡೆಸಲಾಯಿತು.
 
ಇನ್ನೊಂದೆಡೆ ಅಪಘಾತಕ್ಕೆ ಟೋಲ್ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಆಯಂಬುಲೆನ್ಸ್ ಚಾಲಕ ಆರೋಪಿಸಿದ್ದರೆ, ಇನ್ನೊಂದೆಡೆ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲದ್ದರಿಂದಲೇ ಇಂತಹ ಘಟನೆ ಆಗಲು ಕಾರಣ ಎಂದು ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ