ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ 40 ವರ್ಷದ ರಾಜಕೀಯ ಅನುಭವವಿದೆ. ಅವರು ತಮ್ಮ ರಾಜಕೀಯ ಅನುಭವದಿಂದ ಅರ್ಹ ಕಾರ್ಯಕರ್ತರನ್ನು ಪದಾಧಿಕಾರಿಗಳನ್ನಾಗಿ ನೇಮಕ ಮಾಡಿದ್ದಾರೆ ಎಂದರು.
ಪದಾಧಿಕಾರಿಗಳ ಒಂದೊಂದು ಸ್ಥಾನಕ್ಕೂ 15-20 ಆಕಾಂಕ್ಷಿಗಳಿರುತ್ತಾರೆ. ಪ್ರತಿಯೊಬ್ಬರಿಗೂ ಪದಾಧಿಕಾರಿಯಾಗುವ ಆಸೆಯಿರುತ್ತದೆ. ಆದರೆ ಒಂದು ಸ್ಥಾನಕ್ಕೆ ಒಬ್ಬರನ್ನು ಮಾತ್ರ ನೇಮಿಸಲು ಸಾಧ್ಯ. ಪದಾಧಿಕಾರಿಗಳ ನೇಮಕವಾದಾಗ ಸಣ್ಣಪುಟ್ಟ ಗೊಂದಲಗಳು ಎದುರಾಗುವುದು ಸಹಜ. ಅದನ್ನು ನಿಭಾಯಿಸಲು ಬಿಜೆಪಿ ರಾಜ್ಯಾಧ್ಯಕ್ಷರು ಸಮರ್ಥವಾಗಿದ್ದಾರೆ ಎಂದಪ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.