ಯಾವುದೇ ಕಾರಣಕ್ಕೂ ಬಹುಮನಿ ಸುಲ್ತಾನ್ ಉತ್ಸವ ಆಚರಣೆ ಮಾಡಬಾರದು– ಶೋಭಾ

ಬುಧವಾರ, 14 ಫೆಬ್ರವರಿ 2018 (20:04 IST)
ಬಹುಮನಿ ಸುಲ್ತಾನ್ ಉತ್ಸವ ಆಚರಣೆ ಮಾಡಲು ಮುಂದಾಗಿರುವ ಸರ್ಕಾರ ಮುಂದಾಗುವ ಅನಾಹುತಗಳಿಗೆ ಹೊಣೆಯಾಗಬೇಕಾಗುತ್ತದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಬಹುಮನಿ ಸುಲ್ತಾನ್ ಉತ್ಸವ ಆಚರಣೆ ಮಾಡಬಾರದು ಎಂದಿರುವ ಅವರು ವಿಜಯನಗರ ಸಾಮ್ರಾಜ್ಯದ ಪತನಕ್ಕೆ ಕಾರಣವಾದ ಬಹುಮನಿ ಸುಲ್ತಾನ್‌ರ ಉತ್ಸವದ ಮೂಲಕ ಜನರ ಭಾವನೆಗಳಿಗೆ ಧಕ್ಕೆ ತರಲು ಸರ್ಕಾರ ಹೊರಟಿದೆ ಎಂದು ಟೀಕಿಸಿದ್ದಾರೆ.
 
ಈಗಾಗಲೇ ಟಿಪ್ಪು ಸುಲ್ತಾನ್ ಜಯಂತಿ ಮೂಲಕ ಕಾನೂನು ಸುವ್ಯವಸ್ಥೆ ಹದಗೆಡಿಸಲಾಗಿದೆ. ಬಹುಮನಿ ಸುಲ್ತಾನ್ ಉತ್ಸವ ಮೂಲಕ ಕೋಮುಗಲಭೆ ಸೃಷ್ಠಿಸುವ ಪ್ರಯತ್ನ ನಡೆಸಿದೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ