ಪಕ್ಷ ಯಾವುದೇ ಇರಲಿ, ಬಿಲ್ಲವ ಅಭ್ಯರ್ಥಿಗೆ ನಮ್ಮ ಬೆಂಬಲ: ಸತ್ಯಜಿತ್ ಸುರತ್ಕಲ್

Sampriya

ಸೋಮವಾರ, 1 ಏಪ್ರಿಲ್ 2024 (16:25 IST)
Photo Courtesy Facebook
ಮಂಗಳೂರು: ಮುಂಬರುವ ಲೋಕ‌ಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬಿಲ್ಲವ ಅಭ್ಯರ್ಥಿಗಳನ್ನು ನಾರಾಯಣ‌ಗುರು ವಿಚಾರ ವೇದಿಕೆ ಪಕ್ಷತೀತವಾಗಿ ಬೆಂಬಲಿಸುತ್ತದೆ ಎಂದು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಅವರು ಹೇಳಿದರು.

ಮಂಗಳೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡದಲ್ಲಿ ಪದ್ಮರಾಜ್, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ‌ ಶ್ರೀನಿವಾಸ ಪೂಜಾರಿ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಚುನಾವಣಾ ಕಣದಲ್ಲಿದ್ದು ವೇದಿಕೆ ಅವರನ್ನು ಬೆಂಬಲಿಸಲಿದೆ ಎಂದರು.

ಇನ್ನೂ ವಿಚಾರ ವೇದಿಕೆ ಯಾವುದೇ ಪಕ್ಷಕ್ಕೆ ಬೆಂಬಲವನ್ನು ಸೂಚಿಸುತ್ತಿಲ್ಲ. ಬದಲಾಗಿ ಸಮುದಾಯದ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪ್ರಗತಿಗೆ ಶ್ರಮಿಸುವವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಇನ್ನೂ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಲ್ಲವ ಸಮುದಾಯಕ್ಕೆ ಮೂರು ಕ್ಷೇತ್ರಗಳಲ್ಲಿ ಅವಕಾಶ ಸಿಕ್ಕಿದೆ. ಬಿಜೆಪಿಯಲ್ಲಿ 33 ವರ್ಷಗಳ ಬಳಿಕ ಬಿಲ್ಲವ ಅಭ್ಯರ್ಥಿಗೆ ಅವಕಾಶ ಸಿಕ್ಕಿದೆ. ದಕ್ಷಿಣ ಕನ್ನಡ ಕಾಂಗ್ರೆಸ್ ನಲ್ಲಿ ಜನಾರ್ಧನ ಪೂಜಾರಿಯ ಬಳಿಕ ಈಗ ಪದ್ಮರಾಜ್ ಗೆ ಅವಕಾಶ ಸಿಕ್ಕಿದೆ. ಇನ್ನೂ ಮುಂದಿನ ದಿನಗಳಲ್ಲಿ ಪದ್ಮರಾಜ್, ಗೀತಾ ಶಿವರಾಜಕುಮಾರ್,ಕೋಟ ಶ್ರೀನಿವಾಸ ಪೂಜಾರಿ ಪರ ಪ್ರಚಾರ ಮಾಡುತ್ತೇವೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ