ಯಾರೂ ಸುಭದ್ರ ಸರ್ಕಾರವನ್ನು ಕೊಡಲು ಆಗುವುದಿಲ್ಲ- ಕುಮಾರಸ್ವಾಮಿ

ಗುರುವಾರ, 25 ಜುಲೈ 2019 (12:42 IST)
ಬೆಂಗಳೂರು : ಯಾರೂ ಸುಭದ್ರ ಸರ್ಕಾರವನ್ನು ಕೊಡಲು ಆಗುವುದಿಲ್ಲ ಎಂದು ಹಂಗಾಮಿ ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ.




ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡ ಹಿನ್ನಲೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್.ಡಿ.ಕುಮಾರಸ್ವಾಮಿ ಅವರು ಇದೀಗ ಕಾಂಗ್ರೆಸ್ ನಾಯಕ ರಾಮಲಿಂಗರೆಡ್ಡಿ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.ರಾಮಲಿಂಗ ರೆಡ್ಡಿ ಅವರೊಂದಿಗೆ ಕುಮಾರಸ್ವಾಮಿ ಸುಮಾರು 1 ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ.


ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಮಲಿಂಗಾ ರೆಡ್ಡಿ ಅವರು ರಾಜೀನಾಮೆ ನೀಡಿದ್ದರು. ಆದರೆ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಅವರು  ರಾಜೀನಾಮೆ ವಾಪಾಸ್ ಪಡೆದಿದ್ದಾರೆ. ಹಾಗೇ ಮತದಾನಕ್ಕೂ ಹಾಜರಾಗಿದ್ದಾರೆ. ಅವರ ಬಗ್ಗೆ ನಾನು ವಿಧಾನಸಭೆಯಲ್ಲಿ ಮಾತನಾಡಬೇಕಿತ್ತು. ಆದರೆ ಅಲ್ಲಿ ಮಾತನಾಡಲು ಆಗದಿರುವುದರಿಂದ ಇಲ್ಲಿ ಬಂದು ಅವರನ್ನು ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ