ರಾಹುಲ್‌ ಗಾಂಧಿಯಿಂದ ಬೇಗ್‌ವರೆಗೆ ಯಾರಿಗೂ ಮಾತನಾಡಲು ಬರೋಲ್ಲ: ಮುರಳೀಧರ್ ರಾವ್

ಶುಕ್ರವಾರ, 13 ಅಕ್ಟೋಬರ್ 2017 (18:34 IST)
ಕಾಂಗ್ರೆಸ್ ಪಕ್ಷದಲ್ಲಿ ರಾಹುಲ್‌ ಗಾಂಧಿಯಿಂದ ಸಚಿವ ರೋಷನ್‌ ಬೇಗ್‌ವರೆಗೆ ಯಾರಿಗೂ ಮಾತನಾಡಲು ಬರೋಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಕೆ.ಮುರಳೀಧರ್ ರಾವ್ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ರೋಷನ್ ಬೇಗ್, ಪ್ರಧಾನಿ ಮೋದಿಯವರನ್ನು ಅಸಭ್ಯ ಪದಗಳಿಂದ ಟೀಕಿಸಿರುವುದು ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.
 
ದೇಶದ ಪ್ರಧಾನಿಯಾಗಿರುವ ಮೋದಿಯವರಂತಹ ಮೇರು ವ್ಯಕ್ತಿತ್ವದ ನಾಯಕನ ವಿರುದ್ಧ ಅಸಭ್ಯ ಪದಗಳನ್ನು ಬಳಸುವುದು ಕಾಂಗ್ರೆಸ್ ಪಕ್ಷದ ಸಂಸ್ಕ್ರತಿಯನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಕೂಡಲೇ ಸಚಿವ ರೋಷನ್‌ಬೇಗ್‌ರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಂತಹ ಸಚಿವ ರಾಜಕೀಯದಲ್ಲಿರಲು ನಾಲಾಯಕ್ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ