ಸಿಎಂ ಸಿದ್ದರಾಮಯ್ಯ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಪಿ.ಯೋಗೀಶ್ವರ್, ಪಕ್ಷದ ಹೈಕಮಾಂಡ್ ಎಂಪಿ ಚುನಾವಣೆ ಸಂದರ್ಭದಲ್ಲಿ ನನಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿ ಹೋಗಿದೆ. ಹೈಕಮಾಂಡ್ ಏನು ಮಾಡುತ್ತದೆಯೋ ಕಾದು ನೋಡಬೇಕು ಎಂದು ಹೇಳಿದ್ದಾರೆ.