ಬಿಬಿಎಂಪಿ ಮೈತ್ರಿ ಬಗ್ಗೆ ಯಾರ ಬಳಿಯೂ ಚರ್ಚಿಸಿಲ್ಲ: ಸಿಎಂ ಸಿದ್ದರಾಮಯ್ಯ

ಸೋಮವಾರ, 11 ಸೆಪ್ಟಂಬರ್ 2017 (17:20 IST)
ಬೆಂಗಳೂರು: ಬಿಬಿಎಂಪಿ ಮೈತ್ರಿ ಮುಂದುವರಿಕೆ ಬಗ್ಗೆ ಇನ್ನು ನಾವು ಯಾರ ಬಳಿಯೂ ಮಾತನಾಡಿಲ್ಲ ಎಂದು ಸಿಎಂ  ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಬಿಎಂಪಿ ಮೈತ್ರಿ ಬಗ್ಗೆ ಒಂದು ಬಾರಿ ದೇವೇಗೌಡರ ಜೊತೆ ರೋಷನ್ ಬೇಗ್ ಚರ್ಚೆ ಮಾಡಿದ್ದಾರೆ ಅಷ್ಟೆ. ಮೇಯರ್ ಸ್ಥಾನ ಕೊಟ್ರೆ ಬೆಂಬಲ ಅನ್ನೋ ಕುಮಾರಸ್ವಾಮಿ‌ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ನಾವು ಇನ್ನೂ ಮಾತೇ ಆಡಿಲ್ಲ. ನೀವೇ ವಕಾಲತ್ತು ವಹಿಸ್ತೀರಾ ಅಂತ ಗರಂ ಆದ್ರು. ಕೂಡಲೇ ಶಾಂತರಾದ ಸಿಎಂ, ನಾವು ಇನ್ನು ಮಾತನಾಡಿಲ್ಲ. ಮಾತಾಡಿದ ಬಳಕ‌ ಎಲ್ಲ ನಿರ್ಧಾರ ಆಗುತ್ತೆ ಎಂದು ಹೇಳಿದರು.

ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸತ್ಯಾಗ್ರಹಕ್ಕೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರದ ಸಾಕಷ್ಟು ಸಚಿವರ ಮೇಲೆ ಆರೋಪಗಳಿವೆ. ಕೋರ್ಟ್ ನಲ್ಲಿ ಕೇಸ್ ನಡೆಯುತ್ತಿದೆ. ಕೇಂದ್ರ ಮಂತ್ರಿಗಳ ವಿರುದ್ಧ ತನಿಖೆ ನಡೆಯುತ್ತಿದೆ. ಮೊದಲು ಅವರು ರಾಜೀನಾಮೆ ನೀಡಲಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು ಮಳೆ ಹಾನಿಗೆ ಸರ್ಕಾರದ ವೈಫಲ್ಯವೇ ಕಾರಣ ಎಂಬ ಬಿಎಸ್ ವೈ ಆರೋಪ ಸುಳ್ಳು. ಅವರು ಸುಳ್ಳು ಹೇಳ್ತಾರೆ. ಹೀಗಾಗಿ ಅವರ ಹೇಳಿಕೆಗೆ ಪ್ರತಿಕ್ರಿಯೆ ಕೊಡೋದು ಬಿಟ್ಟಿದ್ದೀನಿ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ