ಟಿಕೆಟ್ ನೀಡುವ ಅಧಿಕಾರ ಯಾರಿಗೂ ಇಲ್ಲ: ಸಿಎಂಗೆ ಡಿಕೆಶಿ ಟಾಂಗ್
ಗುರುವಾರ, 25 ಮೇ 2017 (16:29 IST)
ಮುಂಬರುವ ವಿಧಾನಸಭೆ ಚುನಾವಣೆಗೆ ಟಿಕೆಟ್ ಕೊಡುವ ಅಧಿಕಾರ ಯಾರಿಗೂ ಇಲ್ಲ. ಕೇವಲ ಹೈಕಮಾಂಡ್ಗೆ ಮಾತ್ರ ಅಧಿಕಾರವಿದೆ ಎಂದು ಸಿಎಂ ಸಿದ್ದರಾಮಯ್ಯಗೆ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತದೆ. ಸಿಎಂ ಸಿದ್ದರಾಮಯ್ಯ ಅವರಿಗೂ ಕೂಡಾ ಟಿಕೆಟ್ ನೀಡುವ ಅಧಿಕಾರವಿಲ್ಲ ಎಂದು ತಿಳಿಸಿದ್ದಾರೆ.
ನನಗೆ ಟಿಕೆಟ್ ಬೇಕಾದಲ್ಲಿ ಕೂಡಾ ಹೈಕಮಾಂಡ್ನ್ನೇ ಸಂಪರ್ಕಿಸಬೇಕಾಗುತ್ತದೆಯೇ ಹೊರತು ಇಲ್ಲಿ ಯಾರು ಟಿಕೆಟ್ ಕೊಡುವುದಿಲ್ಲ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.