ಮಹದಾಯಿ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು-ಜಯಮಾಲಾ

ಮಂಗಳವಾರ, 13 ಫೆಬ್ರವರಿ 2018 (10:12 IST)
ಬೆಂಗಳೂರು : ಮಹದಾಯಿ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದು ಕಾಂಗ್ರೆಸ್ ಮುಖಂಡೆ, ಚಿತ್ರನಟಿ ಜಯಮಾಲಾ ಅವರು ಹೇಳಿದ್ದಾರೆ.


ಕಾಂಗ್ರೆಸ್ ಪಕ್ಷವನ್ನ ಮತ್ತೆ ಅಧಿಕಾರಕ್ಕೆ ತರುವಲ್ಲಿ ಕಾರ್ಯತಂತ್ರ ಕುರಿತಂತೆ ನಗರದಲ್ಲಿ ಕಾಂಗ್ರೆಸ್ ಮುಖಂಡರ ಸಭೆಯೊಂದನ್ನು ನಡೆಸಲಾಗಿದ್ದು, ಆ ವೇಳೆ ಮಾತನಾಡಿದ ಜಯಮಾಲಾ ಅವರು, ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರಲು ಸಿಎಂ ಸಿದ್ದರಾಮಯ್ಯನವರು ಬೆಂಕಿಯ ಮೇಲೆ ನಡೆದು, ಯಶಸ್ವಿ ಸರ್ಕಾರವನ್ನ ನಡೆಸಿದ್ದಾರೆ. ಸಾಕಷ್ಟು ಜನ ಮೆಚ್ಚುವಂತಹ ಯೋಜನೆಗಳನ್ನ ಜನರಿಗೆ ಮುಟ್ಟಿಸಿ ಯಶಸ್ವಿಯಾದ ನಮ್ಮ ಸರ್ಕಾರ ಒಂದು ಕಪ್ಪು ಚುಕ್ಕೆ ಇಲ್ಲದೆ ಅಧಿಕಾರವನ್ನ ನಡೆಸಿದೆ’ ಎಂದು ಹೇಳಿದ್ದಾರೆ.


‘ಮಹಾದಾಯಿ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಕಳಕಳಿ ಇದೆ. ನಮ್ಮ ಸರ್ಕಾರ ಮಹದಾಯಿ ಹೋರಾಟದ ಪರವಿದ್ದು, ಹೋರಾಟಗಾರರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದೆ. ನೀರಿನ ವಿಚಾರದಲ್ಲಿ ರಾಜಕೀಯ ಮಾಡುವವರಿಗೆ ಸಾಯುವಾಗ ನೀರು ಸಿಗುವುದಿಲ್ಲ’ ಪರೋಕ್ಷವಾಗಿ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ