ಆಗ ವಿಪಕ್ಷ ನಾಯಕ ಶೆಟ್ಟರ್, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಯಾವುದೇ ಯೋಜನೆಗಳನ್ನು ಜಾರಿಗೆ ತರದೆ ಅನ್ಯಾಯ ಎಸಗಲಾಗುತ್ತಿದೆ ಎಂದು ಆರೋಪಿಸಿದರು. ಬಳಿಕ ಉತ್ತರಿಸಿದ ಸಿದ್ದರಾಮಯ್ಯ ಇಡೀ ಕರ್ನಾಟಕವನ್ನು ಒಂದೇ ತೆರನಾಗಿ ಕಾಣಲಾಗುತ್ತಿದ್ದು, ಅಖಂಡ ರಾಜ್ಯದ ಅಭಿವೃದ್ಧಿಯೇ ಸರ್ಕಾರದ ಗುರಿ. ಇದರಲ್ಲಿ ಉತ್ತರ ಕರ್ನಾಟಕಕ್ಕೆ ತಾರತಮ್ಯ ಎಸಗಲಾಗುತ್ತಿದೆ ಎಂಬ ಪ್ರಮೇಯವೇ ಇಲ್ಲ ಎಂದರು. ಆದರೆ ಸಿಎಂ ಹೇಳಿಕೆಗೆ ತೃಪ್ತಿಪಡದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.