ದೇವೇಗೌಡರು ಬದುಕಿರುವವರೆಗೆ ಬಿಜೆಪಿಯೊಂದಿಗೆ ಮೈತ್ರಿಯಿಲ್ಲ: ಜಮೀರ್

ಶನಿವಾರ, 29 ಆಗಸ್ಟ್ 2015 (14:24 IST)
ದೇವೇಗೌಡರು ಬದುಕಿರುವವರೆಗೆ ಬಿಜೆಪಿಯೊಂದಿಗೆ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. 
 
ಬಿಜೆಪಿ ಮುಖಂಡ ಕೇಂದ್ರ ಕಾನೂನು ಖಾತೆ ಸಚಿವ ಡಿ.ವಿ.ಸದಾನಂದಗೌಡರು ಜೆಡಿಎಸ್ ಮುಖ್ಯಸ್ಥ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವ ಕುರಿತಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಹುನ್ನಾರದಲ್ಲಿವೆ ಎಂದರು.
 
ಬಿಬಿಎಂಪಿ ಅಧಿಕಾರದ ಗದ್ದುಗೆ ಅಲಂಕರಿಸಲು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಗಳಿಲ್ಲ. ಕಾಂಗ್ರೆಸ್‌ನೊಂದಿಗೆ ಮಾತುಕತೆ ನಡೆದಿದೆ ಎಂದು ತಿಳಿಸಿದರು.  
 
ಬಿಬಿಎಂಪಿ ಮೈತ್ರಿ ಕುರಿತಂತೆ ಕಾಂಗ್ರೆಸ್ ಪಕ್ಷದಿಂದ ಪ್ರಸ್ತಾವನೆ ಬಂದಿರುವುದು ನಿಜ ಆದರೆ, ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ದೊರೆತಿಲ್ಲ. ದೊರೆತ ನಂತರ ಮೈತ್ರಿಯ ಬಗ್ಗೆ ಚಿಂತಿಸಲಾಗುವುದು. ಬಿಜೆಪಿಯೊಂದಿಗೆ ಹೋಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.
 

ವೆಬ್ದುನಿಯಾವನ್ನು ಓದಿ