ಅಮಾನತಿಗೆ ಹೆದರುವ ಪ್ರಶ್ನೆಯೇ ಇಲ್ಲ: ಬಿಜೆಪಿಗೆ ಸೆಡ್ಡುಹೊಡೆದ ಮಾಜಿ ಮೇಯರ್

ಬುಧವಾರ, 11 ಜನವರಿ 2017 (19:39 IST)
ಪಕ್ಷದಿಂದ ಅಮಾನತು ಮಾಡಿರುವುದರಿಂದ ಹೆದರುವ ಪ್ರಶ್ನೆಯೇ ಇಲ್ಲ ಎಂದು ರಾಯಣ್ಣ ಬ್ರಿಗೇಡ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಸೆಡ್ಡು ಹೊಡೆದಿದ್ದಾರೆ.
ರಾಯಣ್ಣ ಬ್ರಿಗೇಡ್ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ಅಮಾನತು ಮಾಡಿರುವುದರಿಂದ ನಾನು ಹೆದರುವುದಿಲ್ಲ. ನನ್ನ ಅಮಾನತು ಆದೇಶವನ್ನು ಹಿಂಪಡೆಯಿರಿ ಎಂದು ಕೇಳಿಕೊಳ್ಳುವುದು ಇಲ್ಲ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ್ನು ಸಂಘಟಿಸುತ್ತೇನೆ. ನಾನು ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯರ್ತ. ಬಿಜೆಪಿ ಕಾರ್ಯಕರ್ತನಾಗಿ ಮುಂದುವರೆಯುತ್ತೇನೆ ಎಂದರು. 
 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಲ್ಲಿ ಗುರುತಿಸಿಕೊಂಡ ಹಿನ್ನೆಲೆಯಲ್ಲಿ ರಾಯಣ್ಣ ಬ್ರಿಗೇಡ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಮೇಯರ್ ವೆಂಕಟೇಶ ಮೂರ್ತಿ ಅವರನ್ನು ಬಿಜೆಪಿ ಪಾಳಯದಿಂದ ಅಮಾನತು ಮಾಡಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ