ಜಾತಿ ರಾಜಕಾರಣಕ್ಕೆ ಮಾನ್ಯತೆಯಿಲ್ಲ, ನೀತಿ ರಾಜಕಾರಣಕ್ಕೆ ಬೆಲೆ : ಸಿ.ಟಿ.ರವಿ

ಬುಧವಾರ, 19 ಏಪ್ರಿಲ್ 2023 (12:11 IST)
ಚಿಕ್ಕಮಗಳೂರು : ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಜಾತಿ ರಾಜಕಾರಣಕ್ಕೆ ಮಾನ್ಯತೆ ಇಲ್ಲ. ಇಲ್ಲಿ ಈವರೆಗೆ ಗೆದ್ದಿರುವುದು ನೀತಿ ರಾಜಕಾರಣವೇ ಎಂದು ಬಿಜೆಪಿ ಅಭ್ಯರ್ಥಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

ನಗರದ ಪ್ರೆಸ್ ಕ್ಲಬ್ನಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಕೆಲವರು ಜಾತಿ ಹೆಸರಲ್ಲಿ ನನ್ನ ವಿರುದ್ಧ ಎತ್ತಿಕಟ್ಟುವ ಯತ್ನ ಮಾಡುತ್ತಿದ್ದಾರೆ. ಅದು ಫಲಿಸುವುದಿಲ್ಲ. ಇಲ್ಲಿ ಈವರೆಗೆ ಅಭಿವೃದ್ಧಿ ಪರ ಹಾಗೂ ಸಿದ್ಧಾಂತಕ್ಕೆ ಬದ್ಧವಾದ ರಾಜಕಾರಣ ಮಾಡಿದ್ದೇನೆ.

ಜಾತಿ ಮತ್ತು ಪಕ್ಷ ಕೇಳದೆ ನನ್ನ ಕೈಯಲ್ಲಾದ ಒಳ್ಳೆಯ ಕೆಲಸ ಮಾಡಿದ್ದೇನೆ. ಈಗಿನ ವಾತಾವರಣದಲ್ಲಿ ಜಿಲ್ಲೆಯಲ್ಲಿ ಐದಕ್ಕೆ ಐದೂ ಕ್ಷೇತ್ರದಲ್ಲೂ ಬಿಜೆಪಿ ಉತ್ತಮ ಅಂತರದಿಂದಲೇ ಗೆಲ್ಲಲಿದೆ ಎಂದು ಭವಿಷ್ಯ ನುಡಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ