ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರೈತರ ಆತ್ಮಹತ್ಯೆ ಏರಿಕೆಯಾಗುತ್ತಿದ್ದರೂ ಕೂಡ ಸರ್ಕಾರ ಉತ್ತರಿಸುತ್ತಿಲ್ಲ. ಸರ್ಕಾರದ ಸಕಾರಾತ್ಮಕವಾಗಿ ಉತ್ತರಕ್ಕಾಗಿ ಕಾಯುತ್ತಿದ್ದೇವೆ. ಒಂದು ವೇಳೆ ಸರ್ಕಾರ ಸಕಾರಾತ್ಮ ಪ್ರತಿಕ್ರಿಯೆ ತೋರದೆ ಅನುಸಂಧಾನಕ್ಕೆ ಯತ್ನಿಸಿದರೆ ಅದಕ್ಕೆ ನಾವು ಸಿದ್ಧರಿಲ್ಲ. ಆದ್ದರಿಂದ ಮೊದಲು ರೈತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳುವ ನಿರ್ಧಾರಗಳ ಬಗ್ಗೆ ಸದನದಲ್ಲಿ ಘೋಷಿಸಬೇಕು. ಆ ಬಳಿಕವಷ್ಟೇ ಸರ್ಕಾರದೊಂದಿಗೆ ಮಾತುಕತೆಗೆ ಮುಂದಾಗುತ್ತೇವೆ ಎಂದು ಕಡ್ಡಿ ಮುರಿದಂತೆ ನುಡಿದರು.