ಸಕಾರಾತ್ಮಕ ಘೋಷಣೆ ಇಲ್ಲದೆ ಸಂಧಾನವಿಲ್ಲ: ಕೋಡಿಹಳ್ಳಿ ಚಂದ್ರಶೇಖರ್

ಮಂಗಳವಾರ, 30 ಜೂನ್ 2015 (14:04 IST)
ಕಬ್ಬು ಬೆಳೆಗಾರರ ಆತ್ಮಹತ್ಯೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಕೂಡ ಸರ್ಕಾರ ಸೂಕ್ತ ನಿರ್ಣಯ ಕೈಗೊಂಡಿಲ್ಲ ಎಂದು ಬೇಸರಗೊಂಡಿರುವ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಸರ್ಕಾರದೊಂದಿಗೆ ಯಾವುದೇ ರೀತಿಯ ಸಂಧಾನಕ್ಕೆ ನಾವು ಸಿದ್ಧರಿಲ್ಲ ಎಂದಿದ್ದಾರೆ. 
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರೈತರ ಆತ್ಮಹತ್ಯೆ ಏರಿಕೆಯಾಗುತ್ತಿದ್ದರೂ ಕೂಡ ಸರ್ಕಾರ ಉತ್ತರಿಸುತ್ತಿಲ್ಲ. ಸರ್ಕಾರದ ಸಕಾರಾತ್ಮಕವಾಗಿ ಉತ್ತರಕ್ಕಾಗಿ ಕಾಯುತ್ತಿದ್ದೇವೆ. ಒಂದು ವೇಳೆ ಸರ್ಕಾರ ಸಕಾರಾತ್ಮ ಪ್ರತಿಕ್ರಿಯೆ ತೋರದೆ ಅನುಸಂಧಾನಕ್ಕೆ ಯತ್ನಿಸಿದರೆ ಅದಕ್ಕೆ ನಾವು ಸಿದ್ಧರಿಲ್ಲ. ಆದ್ದರಿಂದ ಮೊದಲು ರೈತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳುವ ನಿರ್ಧಾರಗಳ ಬಗ್ಗೆ ಸದನದಲ್ಲಿ ಘೋಷಿಸಬೇಕು. ಆ ಬಳಿಕವಷ್ಟೇ ಸರ್ಕಾರದೊಂದಿಗೆ ಮಾತುಕತೆಗೆ ಮುಂದಾಗುತ್ತೇವೆ ಎಂದು ಕಡ್ಡಿ ಮುರಿದಂತೆ ನುಡಿದರು.  
 
ಪ್ರಸ್ತುತ ರಾಜ್ಯ ಸರ್ಕಾರ ಕಬ್ಬು ಬೆಳೆಗಾರರಿಗೆ ಬಾಕಿ ಹಣ ವಾಪಾಸಾತಿ ಮಾಡಿಲ್ಲ ಎಂದು ವಿರೋಧಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವ ರೈತರು ಸುವರ್ಣಸೌಧದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.  

ವೆಬ್ದುನಿಯಾವನ್ನು ಓದಿ