ಇತಿಹಾಸದಲ್ಲಿಯೇ ಭಾರತ ಎಂದೂ ಇಂತಹ ಪ್ರಧಾನಿ ಕಂಡಿಲ್ಲ : ಯಡಿಯೂರಪ್ಪ

ಶನಿವಾರ, 17 ಜೂನ್ 2017 (15:20 IST)
ಇತಿಹಾಸದಲ್ಲಿಯೇ ಭಾರತ ಎಂದೂ ಇಂತಹ ಪ್ರಧಾನಿ ಕಂಡಿಲ್ಲ, ಇದು ನಮ್ಮೆಲ್ಲರ ಸೌಭಾಗ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ಕೇಂದ್ರ ಸರಕಾರದ ಉಜ್ವಲ ಯೋಜನೆ ಪ್ರತಿಯೊಬ್ಬರಿಗೂ ತಲುಪಬೇಕು. ಅಧಿಕಾರಿಗಳು ಆ ರೀತಿಯಲ್ಲಿ ಕೆಲಸ ಮಾಡಬೇಕು. ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ರಾಜ್ಯ ಸರಕಾರ ಸಹಕಾರ ಸಂಘಗಳಲ್ಲಿರುವ ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
 
ರಾಜ್ಯದಲ್ಲಿ ಇನ್ಮುಂದೆ ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು. ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಒಳ್ಳೆಯ ಕಾಲ ಬರಲಿದೆ. ಈ ಸಮಯದಲ್ಲಿ ನಾವು ರಾಜಕೀಯ ಮಾಡುವುದು ಬೇಡ. ಇದು ರಾಜಕೀಯ ಸಮಾವೇಶವಲ್ಲ ಎಂದು ತಿಳಿಸಿದ್ದಾರೆ.  
 
ಕರ್ನಾಟಕ ರಾಜ್ಯದ ಎಲ್ಲಾ ಬಡವರ ಪರ ಯೋಜನೆಗಳು ಜನತೆಗೆ ತಲುಪಬೇಕು. ಬಡವರ, ಶೋಷಿತರ, ರೈತರ ಏಳಿಗೆಯಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ